Monday, May 20, 2024
spot_imgspot_img
spot_imgspot_img

ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಪೋಟ; 20ಕ್ಕೂ ಅಧಿಕ ಮಂದಿಗೆ ಗಾಯ, 8 ಮಂದಿಯ ಸ್ಥಿತಿ ಗಂಭೀರ..!

- Advertisement -G L Acharya panikkar
- Advertisement -

ಯಾದಗಿರಿ: ಯಾದಗಿರಿಯ ದೋರೆನಹಳ್ಳಿ ಕ್ಯಾಂಪ್‌ನಲ್ಲಿ ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿಯೇ ಸಿಲಿಂಡರ್ ಸ್ಪೋಟಗೊಂಡು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅದರಲ್ಲಿ 8 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.

ಶುಕ್ರವಾರ ಮಧ್ಯಾಹ್ನ 2.30ರ ಸಮಯದಲ್ಲಿ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಮಾಡೋದಕ್ಕೆ ಬಳಸಲಾಗುತ್ತಿದ್ದಂತ ಸಿಲಿಂಡರ್ ಸ್ಪೋಟಗೊಂಡಿದ್ದು, ಸಿಲಿಂಡಲ್ ಬ್ಲಾಸ್ಟ್ ನಿಂದಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

vtv vitla
vtv vitla

ಇನ್ನು ಈ ಘಟನೆಯ ನಂತ್ರ, ಗಾಯಾಳುಗಳನ್ನು ಶಹಪೂರದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. 20 ಜನರಲ್ಲಿ 8 ಮಂದಿ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!