ಸುಬ್ರಹ್ಮಣ್ಯ: ಕುಕ್ಕೆ ಕ್ಷೇತ್ರಕ್ಕೆ ಬಂದ ಪ್ರವಾಸಿಗನೊಬ್ಬ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದು ಕಣ್ಮರೆಯಾದ ಘಟನೆ ಮದ್ಯಾಹ್ನ ನಡೆದಿದೆ.
ನೀರಿನಲ್ಲಿ ಕೊಚ್ಚಿ ಹೋದ ಯುವಕನನ್ನು ಮೂಲತಃ ಮಂಡ್ಯದ ಯುವಕ ಶಿವು( 25) ಎನ್ನಲಾಗಿದೆ . ಈತ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರು ದೀಪಾಂಜಲಿ ನಗರದಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
21 ಜನರ ತಂಡ ವಿವಿಧ ಕ್ಷೇತ್ರಗಳ ಭೇಟಿಗೆ ಬಂದಿದ್ದು ಕುಕ್ಕೆಗೂ ಆಗಮಿಸಿ ಕುಮಾರಧಾರ ಸ್ನಾನಘಟ್ಟಕ್ಕೂ ಬಂದಿದ್ದರು. ಈ ವೇಳೆ ನದಿಗೆ ಇಳಿಯದಂತೆ ಸ್ನೇಹಿತರೂ ಸೂಚಿಸಿದರೂ ತಡೆಹಗ್ಗ ದಾಟಿ ನದಿ ನೀರಿಗೆ ಇಳಿದಿದ್ದಾನೆ ಎಂದು ಆತನ ಸ್ನೇಹಿತರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಎಸ್.ಐ ಮಂಜುನಾಥ್ ಆಗಮಿಸಿದ್ದಾರೆ.ನದಿ ತಟದಲ್ಲಿ ಜತೆಗೆ ಬಂದಿದ್ದ ಸ್ನೇಹಿತರ ರೋಧನ ಮುಗಿಲು ಮುಟ್ಟಿದೆ. ಸ್ಥಳದಲ್ಲಿ ಸುಮಾರು ಮಂದಿ ಸೇರಿದ್ದಾರೆ. ನದಿ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಪತ್ತೆಗೆ ಬೋಟ್ ಬಳಸಿ ಹುಡುಕಾಟಕ್ಕೆ ಸಿದ್ದತೆ ನಡೆಸಲಾಗಿದೆ.