- Advertisement -
- Advertisement -
ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದುಗೊಳಿಸುವಂತೆ ತೀರ್ಮಾನಿಸಲಾಗಿದೆ.
ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಸ್ಫೂರ್ತಿಯಿಂದ ನಡೆಸುವ ಸೇವೆ ಇದಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಎಡೆಸ್ನಾನ ಸೇವೆಗೆ ಅವಕಾಶ ಇರಲಿಲ್ಲ.
- Advertisement -