Sunday, May 5, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ಮುಸ್ಲಿಂ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ; ಹಿಂದೂ ಕಾರ್ಯಕರ್ತರಿಬ್ಬರ ಬಂಧನ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಸುಬ್ರಹ್ಮಣ್ಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಹಫೀದ್‌ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯವಾಗಿ ಹಿಂದೂಪರ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ರಾಧಾಕೃಷ್ಣ (45), ವಿಶ್ವಾಸ್‌ ಎನ್‌. (19) ಎಂದು ಗುರುತಿಸಲಾಗಿದೆ. ಜ. 5ರಂದು ಘಟನೆ ನಡೆದಿತ್ತು.

ಜ.5ರಂದು ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ತಂಡವೊಂದು ಹಲ್ಲೆ ನಡೆಸಿತ್ತು ಎಂದು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದ ಹಫೀದ್‌ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದ. ಇದೇ ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ತಂದೆಯು ಹಫೀದ್‌ ವಿರುದ್ಧ ಪುತ್ರಿಯ ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ ಬಗ್ಗೆ ದೂರು ನೀಡಿದ್ದರು. ಹಫೀದ್‌ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!