Friday, May 3, 2024
spot_imgspot_img
spot_imgspot_img

ಸುರತ್ಕಲ್ ಟೋಲ್ ಗೇಟ್ ಬಳಿ ಶುಕ್ರವಾರ(ಅ.28)ದಿಂದ ಅನಿರ್ಧಿಷ್ಟಾವಧಿ ಧರಣಿ

- Advertisement -G L Acharya panikkar
- Advertisement -

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವುಗೊಳ್ಳುವ ತನಕ ಹೋರಾಟದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿರುವ ಹೋರಾಟ ಸಮಿತಿಯವರು ಅ. 28ರಿಂದ ಅಹೋ ರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ನಾಳೆಯಿಂದ ಸುರತ್ಕಲ್ ಟೋಲ್‌ಗೇಟ್‌ನಲ್ಲಿ ಹಗಲು-ರಾತ್ರಿ ಧರಣಿ ನಡೆಯಲಿದೆ. ಟೋಲ್‌ಗೇಟ್ ತೆರವು ಆಗುವ ತನಕ ಹಗಲು-ರಾತ್ರಿ ಧರಣಿ ಮುಂದುವರೆಯಲಿದೆ ಎಂದು ದೈಜಿವರ್ಲ್ಡ್ ಗೆ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ಪ್ರತಿಕ್ರಿಯೆ ನೀಡಿದ್ದಾರೆ.

ಟೋಲ್‌ಗೇಟ್ ಮುಚ್ಚುವ ಅಧಿಕೃತ ಪ್ರಕಟಣೆ ಹೊರಡಿಸಬೇಕು. ಇಲ್ಲವಾದಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸಬೇಕು. ಅಲ್ಲಿ ತನಕ ಹಗಲು-ರಾತ್ರಿ ಧರಣೆ ಮುಂದುವರಿಯಲಿದೆ. ಟೋಲ್ ಹೋರಾಟಗಾರರ ಜತೆ ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಮಾತುಕತೆ ನಡೆಸಿದ್ದಾರೆ. 10 ದಿನದ ಕಾಲಾವಧಿ ನೀಡಿ ಎಂದು ಹೋರಾಟಗಾರರಿಗೆ ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!