- Advertisement -
- Advertisement -
ಸುರತ್ಕಲ್: ಸುರತ್ಕಲ್ನ ಟೋಲ್ ಗೇಟನ್ನು ತೆರವುಗೊಳಿಸುವ ಬಗ್ಗೆ 15 ದಿನಗಳ ಒಳಗಾಗಿ ಕ್ರಮ ಜರಗಿಸುವ ಭರವಸೆಯನ್ನು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಟ್ರಕ್ ಮಾಲಕರ ಸಂಘದ ಅಧ್ಯಕ್ಷ ಸುನೀಲ್ ಡಿ’ಸೋಜಾ ಹೇಳಿದರು.
ಕೂಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಸಂಘದ ರಾಜ್ಯಾಧ್ಯಕ್ಷ ಡಾ| ಜಿ.ಆರ್. ಷಣ್ಮುಗಪ್ಪ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಸೆ. 9ರಂದು ಟ್ರಾನ್ಸ್ ಪೋರ್ಟ್ ಮೀಟ್ ಸಭೆಯ ಬಳಿಕ ಭೇಟಿ ಮಾಡಿ ಟೋಲ್ ಗೇಟ್ ತೆರವು ಬಗ್ಗೆ ಮನವಿ ನೀಡಿದ್ದು, ಸಚಿವರಿಂದ ಭರವಸೆ ದೊರಕಿದೆ. ಟೋಲ್ ಗೇಟ್ ವಿರೋಧಿ ಸಮಿತಿ ಸೆ. 13ರಂದು ನಡೆಸಲು ಉದ್ದೇಶಿಸಿರುವ ಧರಣಿಯಲ್ಲಿ ನಾವೂ ಭಾಗಿಯಾಗುತ್ತೇವೆ. ಸರಕಾರ ಮಾತು ತಪ್ಪಿದಲ್ಲಿ ಟ್ರಕ್ಗಳ ಮೂಲಕ ಟೋಲ್ ಗೇಟ್ಗೆ ಮುತ್ತಿಗೆ ಹಾಕುತ್ತೇವೆ ಎಂದರು.
- Advertisement -