Thursday, April 25, 2024
spot_imgspot_img
spot_imgspot_img

ಸುರತ್ಕಲ್‌: ಪೋಷಕರ ಸಭೆಯಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್‌

- Advertisement -G L Acharya panikkar
- Advertisement -
vtv vitla

ಸುರತ್ಕಲ್: ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ಪೋಷಕರ ಸಭೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆ ಕಾಟಿಪಳ್ಳ ಎರಡನೇ ಬ್ಲಾಕ್ ಶಂಶುದ್ದೀನ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಶಿಕ್ಷಕಿ ಇಲ್ಲಿನ ಪದ್ಮಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಕಾಟಿಪಳ್ಳ ನಾರಾಯಣಗುರು ನಿವಾಸಿ ಚಂದ್ರಕಲಾ ಹಲ್ಲೆಗೊಳಗಾದವರು. ಮುಹಮ್ಮದ್ ಹನೀಫ್ ಹಲ್ಲೆ ನಡೆಸಿದ ಆರೋಪಿ.

ಸುರತ್ಕಲ್ ಠಾಣೆಯ ಪಿಎಸ್‌ಐ ಪುನೀತ್ ಗಾಂವ್ಕರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ವಿರುದ್ಧ ಮಹಿಳಾ ದೌರ್ಜನ್ಯ, ಹಲ್ಲೆ ಪ್ರಕರಣ ದಾಖಲಾಗಿದೆ.

ಪರಿಚಯದ ನೆಲೆಯಲ್ಲಿ ಹನೀಫ್ ಪತ್ನಿಗೆ ಚಂದ್ರಕಲಾ ಅವರು ಸಾಲ ನೀಡಿದ್ದರು. ಆ ಮಹಿಳೆ ಸಾಲವನ್ನು ಹಿಂತಿರುಗಿಸಿರಲಿಲ್ಲ. ಹಣದ ಅವಶ್ಯಕತೆ ಇದ್ದು, ಸಾಲವನ್ನು ಹಿಂತಿರುಗಿಸುವಂತೆ ಚಂದ್ರಕಲಾ ಕೇಳಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಹನೀಫ್ ಎರಡು ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಶಾಲೆಯಲ್ಲಿ ಪೋಷಕರ ಸಭೆಯ ಸಂದರ್ಭದಲ್ಲಿ ಚಂದ್ರಕಲಾ ಮತ್ತು ಹನೀಫ್ ಪತ್ನಿಯ ಮಧ್ಯೆ ಜಗಳ ನಡೆದಿದೆ. ಮಾತಿನ ಭರದಲ್ಲಿ ಶಿಕ್ಷಕಿಯು ತನ್ನ ಮಗುವಿನ ವಿಚಾರ ಪ್ರಸ್ತಾಪಿಸಿದ್ದಾರೆ ಎಂದು ಸಿಟ್ಟಾದ ಹನೀಫ್ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಶಿಕ್ಷಕಿಯ ಬಲಗೈಗೆ ಬಲವಾದ ಪೆಟ್ಟು ಬಿದ್ದಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!