- Advertisement -
- Advertisement -
ಸುರತ್ಕಲ್: ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಟೊಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕನನ್ನು ಬಜ್ಪೆ ಕೆಂಜಾರು ಶ್ರೀದೇವಿ ಕಾಲೆಜಿನ ವಿದ್ಯಾರ್ಥಿ ಮೂಲತಃ ಮಡಿಕೇರಿ ಸೋಮವಾರಪೇಟೆ ಬಿಟಿ ಕಟ್ಟೆಯ ನಿವಾಸಿ ಶಶಾಂಕ್(21) ಎಂದು ತಿಳಿದು ಬಂದಿದೆ.
ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದ್ದು, ಬೈಕ್ ನ ಹಿಂಬದಿ ಸವಾರರಾಗಿ ತೆರಳುತ್ತಿದ್ದ ಇವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಭೇಟಿ ನಿಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -