Monday, June 30, 2025
spot_imgspot_img
spot_imgspot_img

ಸುರತ್ಕಲ್: ಭೀಕರ ರಸ್ತೆ ಅಪಘಾತ; ಅರ್ಚಕ ದಾರುಣ ಸಾವು

- Advertisement -
- Advertisement -

ಸುರತ್ಕಲ್: ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಲಾರಿಯ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.

ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಅಕ್ಷಯ್ (33) ಎಂದು ಗುರುತಿಸಲಾಗಿದೆ.

ಅಕ್ಷಯ್ ಅವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿಯ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ಲಾರಿಯ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಉಂಟಾದ ಸಂಚಾರ ದಟ್ಟನೆಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್‌ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿಗೆ ಹಿಂದುರುಗಿ ಬರುತ್ತಿರುವ ವೇಳೆ ಘಟನೆ ನಡೆದಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!