- Advertisement -
- Advertisement -
ಸುರತ್ಕಲ್: ಇಲ್ಲಿನ ಕಾಟಿಪಳ್ಳದ ಕೃಷ್ಣಾಪುರದಲ್ಲಿ ಐವರ ತಂಡವೊಂದು ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಫೆ.01 ರ ತಡರಾತ್ರಿ ನಡೆದಿದೆ. ಹಲ್ಲೆಗೊಳಗಾದ ಯುವಕ ಮೊಹಮ್ಮದ್ ಅನಾಸ್ (29) ಎನ್ನಲಾಗಿದೆ.
ಆರೋಪಿಗಳನ್ನು ಚಾರು, ರವೂಫ್, ಅಕ್ಕಿ , ಮುಸ್ತಫಾ ಮತ್ತು ಇನ್ನೊಬ್ಬ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಹೆಸರಿಸಲಾಗಿದೆ.
ಮೊಹಮ್ಮದ್ ಅನಾಸ್ ತನ್ನ ಪರಿಚಯಸ್ಥರೊಂದಿಗೆ ತನ್ನ ಮನೆ ಮುಂದೆ ಮಾತನಾಡುತ್ತಾ ನಿಂತಿದ್ದಾಗ 4-5 ಮಂದಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ. ಹಲ್ಲೆಗೊಳಗಾದ ಅನಾಸ್ ಅವರು ಚಾರು, ರವೂಫ್ ವಾಸವಿದ್ದ ಬಾಡಿಗೆ ಮನೆ ತೆರವು ಮಾಡಿಸುವಲ್ಲಿ ಮಧ್ಯಸ್ಥಿಕೆ ವಹಿಸಿದ್ದು, ಇದೇ ದ್ವೇಷದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಅನಾಸ್ ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -