Friday, May 3, 2024
spot_imgspot_img
spot_imgspot_img

ಸುರತ್ಕಲ್‌: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಯಕ್ಷಗಾನ ಮೇಳದ ಸಿಬ್ಬಂದಿ ಸ್ಥಳದಲ್ಲೇ ಮೃತ್ಯು..!!

- Advertisement -G L Acharya panikkar
- Advertisement -
vtv vitla

ಸುರತ್ಕಲ್‌: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಮೇಳದ ಯಕ್ಷಗಾನ ಸಿಬ್ಬಂದಿ ಮೃತಪಟ್ಟ ಘಟನೆ ಸುರತ್ಕಲ್‌ ಬಳಿಯ ಮುಕ್ಕ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಬೆಳಾಲು ನಿವಾಸಿ ರಾಘವ ಯಾನೆ ಜೀವನ್‌ (35)ಎನ್ನಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಆಯೋಜನೆ ಮಾಡಲಾಗಿತ್ತು.ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜೀವನ್ ಕುಮಾರ್ ನಿನ್ನೆ ಸಂಜೆ 4.30 ರ ಸುಮಾರಿಗೆ ರಸ್ತೆ ದಾಟುತ್ತಿರುವ ಸಂದರ್ಭ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಜೀವನ್ ಕುಮಾರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜೀವನ ಧರ್ಮಸ್ಥಳ ಮೇಳದಲ್ಲಿ ಸುಮಾರು 15 ವರ್ಷಗಳಿಗಿಂತಲೂ ಹೆಚ್ಚು ಸಮಯಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಎಂದು ತಿಳಿದು ಬಂದಿದೆ.

ಮೃತ ಜೀವನ್ ಅವರು ತಂದೆ-ತಾಯಿ, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!