- Advertisement -
- Advertisement -
ಫಾಝಿಲ್ ಹತ್ಯೆಯ ಬಳಿಕ ಶಾಂತವಾಗಿದ್ದ ಸುರತ್ಕಲ್ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ಯುವಕನೊಬ್ಬನಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ಶನಿವಾರ(ಡಿ.24) ಸಂಜೆ ಸುರತ್ಕಲ್ ಸಮೀಪದ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದ್ದು, ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಂಗಡಿಯ ಮುಂದೆ ನಿಂತಿದ್ದ ವೇಳೆ ಬಂದ ದುಷ್ಕರ್ಮಿಗಳು, ಚೂರಿ ಇರಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
- Advertisement -