Saturday, April 27, 2024
spot_imgspot_img
spot_imgspot_img

ಸುಳ್ಯ: ಅಡುಗೆ ಮಾಡುತ್ತಿರುವಾಗ ಆಕಸ್ಮಿಕ ಬೆಂಕಿ; ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತ್ಯು

- Advertisement -G L Acharya panikkar
- Advertisement -

ಸುಳ್ಯ: ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕಳಂಜ ಗ್ರಾಮದ ಬಾಳೆಗುಡ್ಡೆಯಲ್ಲಿ ನಡೆದಿದೆ.

ಕುಂಞಣ್ಣ ನಾಯ್ಕರ ಪುತ್ರಿ ಕುಸುಮ (41) ಮೃತ ಯುವತಿ.

ಅಡುಗೆ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಅವರು ಕೊನೆಯುಸಿರೆಳೆದರು.

ಸಹೋದರರಾದ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘ ಮತ್ತು ಸುಳ್ಯ ಲ್ಯಾಂಪ್ ಸೊಸೈಟಿ ನಿರ್ದೇಶಕ ಶುಭ ಕುಮಾರ್ ಬಾಳೆಗುಡ್ಡೆ, ಜಯಕುಮಾರ್ ಬಾಳೆಗುಡ್ಡೆ, ಸಹೋದರಿ ಮಮತಾ ಸೇರಿದಂತೆ ಕುಟುಂಬಸ್ಥರು, ಬಂಧು ಮಿತ್ರ ರನ್ನು ಅಗಲಿದ್ದಾರೆ.

- Advertisement -

Related news

error: Content is protected !!