Saturday, June 28, 2025
spot_imgspot_img
spot_imgspot_img

ಸುಳ್ಯ: ಈಜಲು ಹೋಗಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ದುರ್ಮರಣ

- Advertisement -
- Advertisement -

ಸುಳ್ಯ: ಪಯಸ್ವಿನಿ ಹೊಳೆಗೆ ಈಜಾಡಲು ಹೋಗಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ. ಜಿತೇಶ್ ಹಾಗೂ ಪ್ರವೀಣ್ ಮೃತಪಟ್ಟ ಯುವಕರು.

ಅಜ್ಜಾವರ ಗ್ರಾಮದ ದೊಡ್ಡೇರಿ ಎಂಬಲ್ಲಿಗೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಪುತ್ತೂರು ಕೌಡಿಚ್ಚಾರು ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಓಡಬಾಯಿ ಬಳಿ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡೇರಿಗೆ ಹೋಗಿ ಬಳಿಕ ಪಯಸ್ವಿನಿ ಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರು ಯುವಕರು ನೀರುಪಾಲಾದರೆಂದು ಹೇಳಲಾಗಿದೆ.

ಒಬ್ಬ ಯುವಕ ನೀರಿಗಿಳಿದು ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಆತನ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ಪ್ರಾಥಮಿಕ ವರದಿಯಲ್ಲಿ ಮಾಹಿತಿ ಲಭ್ಯವಾಗಿದೆ. ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡು,ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜತೆಯಾಗಿ ಸುಳ್ಯಕ್ಕೆ ಬಂದಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!