Sunday, June 29, 2025
spot_imgspot_img
spot_imgspot_img

ಸುಳ್ಯ: ಕಟೀಲು ಮೇಳದಲ್ಲಿದ್ದ ಪ್ರಸಿದ್ದ ಕಲಾವಿದ ಜಾಂಡೀಸ್‌ಗೆ ಬಲಿ

- Advertisement -
- Advertisement -
vtv vitla

ಸುಳ್ಯ: ಕಟೀಲು ಮೇಳದಲ್ಲಿದ್ದ ಸುಳ್ಯ ತಾಲೂಕಿನ, ಮರ್ಕಂಜ ಗ್ರಾಮದ ಕುದ್ಕುಳಿಯ, ಸದ್ಯ, ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನೆಲೆಸಿರುವ ದಿ. ಮೋಂಟಪ್ಪ ಗೌಡ ಕುಮ್ಮಳಿಯವರ ಪುತ್ರ ಚಿದಾನಂದ (28) ಜಾಂಡಿಸ್ ಗೆ ಬಲಿಯಾಗಿದ್ದಾರೆ.

ಕುಮಾರ ಸುಬ್ರಹ್ಮಣ್ಯ ಭಟ್ ವಳಕು೦ಜರವರ ಮಾರ್ಗದರ್ಶನದಲ್ಲಿ ಮದ್ದಳೆ ಕಲಿತು ಕಟೀಲು ಮೇಳಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ ಮೇಳದಲ್ಲಿ ಭಾಗವತರಾಗಿ, ನಾಟ್ಯ ಕಲಾವಿದರಾಗಿಯೂ ತೊಡಗಿಕೊಂಡಿದ್ದರು. ನಂತರ ಅವರು ಮದ್ದಳೆಯಲ್ಲಿ ಹೆಸರುವಾಸಿಯಾಗಿದ್ದರು. ಸತೀಶ್ ಶೆಟ್ಟಿ ಪಟ್ಲರವರಂತಹ ಪ್ರಸಿದ್ಧ ಭಾಗವತರಿಗೆ ಹಿಮ್ಮೇಳದಲ್ಲಿ ಮದ್ದಳೆಯಲ್ಲಿ ಸಾಥ್ ನೀಡುತ್ತಿದ್ದರು.

ಇವರು ಸುಮಾರು 15 ವರ್ಷಗಳಿಂದಲೂ ಹೆಚ್ಚು ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಜಾಂಡೀಸ್‌ ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!