- Advertisement -
- Advertisement -
ಸುಳ್ಯ: ಜೇನು ತೆಗಿಯಲೆಂದು ಮರ ಹತ್ತಿದ್ದ ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ.
ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು ಎಂದು ಹೇಳಲಾಗಿದ್ದು, ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದ ಎನ್ನಲಾಗಿದೆ.
- Advertisement -