- Advertisement -
- Advertisement -
ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮರದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿ ನಡೆದಿದೆ.
ನೆಲ್ಲೂರು ಕಮ್ರಾಜೆ ಗ್ರಾಮದ ನಾರ್ಣಕಜೆ ದಿ.ಕುಂಞ ಎಂಬವರ ಪುತ್ರ ಹರೀಶ (29 ವರ್ಷ ಪ್ರಾಯ) ಎಂಬವರೇ ಮೃತ ಪಟ್ಟ ದುರ್ದೈವಿ.
ಹರೀಶ್ ಇಂದು ನೆಲ್ಲೂರು ನಾರ್ಣಕಜೆ ಬಳಿ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಎರಡು ಮಕ್ಕಳು, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
- Advertisement -