- Advertisement -
- Advertisement -
ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಪೆರುವಾಜೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.6 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಳ್ಯ ತಾಲೂಕಿನ ಬಾಳಿಲದ ದೋಳ್ತೋಡಿ ರಾಮಚಂದ್ರ ಮಣಿಯಾಣಿ (51) ಎನ್ನಲಾಗಿದೆ.
ಡಿ.5 ರಂದು ಮನೆಯಿಂದ ಕಾಣೆಯಾಗಿದ್ದ ಇವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪೆರುವಾಜೆ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಪೆರುವಾಜೆಯಲ್ಲಿ ಇವರ ತಮ್ಮನ ಜಾಗವಿದ್ದು ಜಾಗದ ಪಕ್ಕದ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.
- Advertisement -