Monday, April 29, 2024
spot_imgspot_img
spot_imgspot_img

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಗಳ ವಿರುದ್ಧ ಬರಹಗಳಾಗಲೀ ಅಥವಾ ಅವರ ಘನತೆ ಗೌರವಕ್ಕೆ ಧಕ್ಕೆ ತರುವ ಯಾರೇ ಆಗಲೀ ಎಷ್ಟೇ ಪ್ರಭಾವಿಗಳೇ ಆಗಲಿ ಬಿಡುವ ಪ್ರಶ್ನೆಯೇ ಇಲ್ಲ -ಅಶೋಕ್ ರೈ ಅಭಿಮಾನಿ ಬಳಗ

- Advertisement -G L Acharya panikkar
- Advertisement -

ಸುಳ್ಯ: ಫೇಸ್‌ಬುಕ್‌ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್‌ ರೈ ವಿರುದ್ಧ ಯುವಕನೋರ್ವ ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ ಅಭಿಮಾನಿ ಬಳಗದ ಸುಮಾರು 15ಕ್ಕೂ ಹೆಚ್ಚು ಯುವಕರ ತಂಡ ಸುಳ್ಯ ಜಯನಗರ ಪ್ರಮೀತ್‌ ರಾವ್‌ರವರ ಮನೆಗೆ ತೆರಳಿ ಫೇಸುಕ್ಕಿನಲ್ಲಿ ಬರೆದ ಪೋಸ್ಟನ್ನು ಡಿಲೀಟ್ ಮಾಡುವಂತೆ ಮತ್ತು ಶಾಸಕರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು, ವಿಷಯ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ತಂಡದವರನ್ನು ಸುಳ್ಯ ಠಾಣೆಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ ಬಗ್ಗೆ ವರದಿಯಾಗಿದೆ.

ಫೇಸ್‌ಬುಕ್ ನಲ್ಲಿ ತಮ್ಮ ನಾಯಕರ ವಿರುದ್ಧ ಅವಹೇಳನಕಾರಿ ಬರಹವನ್ನು ನೋಡಿದ ಶಾಸಕರ ಅಭಿಮಾನಿ ಬಳಗದ ಯುವಕರು ಬರೆದ ವ್ಯಕ್ತಿಯನ್ನು ಕಂಡುಹಿಡಿದು ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಕೂಡಲೇ ಅದನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಪಮೀತ್ ಅವರು ನಾನು ಅದನ್ನು ಡಿಲೀಟ್ ಮಾಡುವುದಿಲ್ಲ ಎಂದು ಹೇಳಿರುವುದಾಗಿಯೂ ಈ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದು ಪಮಿತ್ ರವರು ಆ ಯುವಕರನ್ನು ಧೈರ್ಯವಿದ್ದಾರೆ ಸುಳ್ಯದ ಜಯನಗರಕ್ಕೆ ಬರಲು ಹೇಳಿದ್ದಾರೆಂದು,ಕರೆಯನ್ನು ಸ್ವೀಕರಿಸಿದ ಪುತ್ತೂರಿನ ಯುವಕರ ತಂಡ ಸುಮಾರು 15ಕ್ಕೂ ಹೆಚ್ಚು ಮಂದಿ ಜಯನಗರದ ಪುಮೀತ್ ರವರ ಮನೆಯನ್ನು ಹುಡುಕಿ ಜಯನಗರಕ್ಕೆ ಬಂದಿರುತ್ತಾರ ಎನ್ನಲಾಗಿದೆ. ಪುತ್ತೂರಿನಿಂದ ಬಂದ ಯುವಕರು ಪ್ರಮಿತ್ ರವರ ಮನೆಗೆ ತೆರಳಿ ಕೂಡಲೆ ನಮ್ಮ ನಾಯಕರಾದ ಅಶೋಕ್ ರೈ ಅವರ ಬಳಿ ಕ್ಷಮೆ ಯಾಚಿಸಬೇಕು ಮತ್ತು ಫೇಸ್‌ಬುಕ್‌ನಲ್ಲಿ ಹಾಕಿರುವಂತಹ ಪೋಸ್ಟರ್ ಅನ್ನು ಡಿಲೀಟ್ ಮಾಡಬೇಕು ಎಂದು ಕೇಳಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಪ್ರಮೀತ್ ರವರು ಅದನ್ನು ಒಪ್ಪಲಿಲ್ಲವೆಂದು ವಿಷಯ ವಿಕೋಪಕ್ಕೆ ತೆರಳಿ ಮಾತಿನ ಚಕಮುಕಿ ನಡೆದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಘಟನೆ ತಿಳಿದ ಸ್ಥಳೀಯ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸತೊಡಗಿದರು. ಆ ಬಳಿಕ ಪ್ರಮೀತ್‌ ಪೋಸ್ಟ್‌ ಡಿಲೀಟ್‌ ಕ್ಷಮೆ ಯಾಚಿಸಿದರೆ ಎನ್ನಲಾಗಿದೆ.

ಈ ವೇಳೆ ಮಾಹಿತಿ ತಿಳಿದ ಸುಳ್ಯ ಪೊಲೀಸ್‌ ಠಾಣಾ ಅಪರಾಧ ವಿಭಾಗದ ಉಪನಿರೀಕ್ಷಕ ಶಾಹಿದ್ ಅಫ್ರಿದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ಜನರ ಗುಂಪನ್ನು ಚದುರಿಸಿ ಪುತ್ತೂರಿನಿಂದ ಬಂದಿದ್ದ ಯುವಕರನ್ನು ಮತ್ತು ಪಮೀತ್ ರವರನ್ನು ಸುಳ್ಯ ಠಾಣೆಗೆ ಕರೆದೋಯ್ದಿದ್ದಾರೆ. ಘಟನೆಯ ವಿವರವನ್ನು ಪಡೆದಿದ ಪುತ್ತೂರು ವಿಭಾಗದ ಡಿವೈಎಸ್ಪಿ ಡಾ. ಗಾನಾ ಪಿ ಕುಮಾರ್ ರವರು ಕೂಡಲೇ ಸುಳ್ಯ ಠಾಣೆಗೆ ಬಂದಿದ್ದು ಎರಡು ತಂಡದವರನ್ನು ವಿಚಾರಣೆ ನಡೆಸಿದ್ದು, ಬಳಿಕ ಪ್ರಕರಣ ರಾಜಿಯಲ್ಲಿ ಇತ್ಯರ್ಥಪಡಿಸಿ ಕೊಂಡಿರುವುದಾಗಿ ತಿಳಿದುಬಂದಿದೆ.



- Advertisement -

Related news

error: Content is protected !!