Saturday, May 18, 2024
spot_imgspot_img
spot_imgspot_img

ಸುಳ್ಯ: ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಮನೆಯವರ ವಿರೋಧ; ಮನೆ ಬಿಟ್ಟು ಹೋಗಿ ಮದುವೆಯಾದ ಗ್ರಾ.ಪಂ ಸದಸ್ಯ..!!

- Advertisement -G L Acharya panikkar
- Advertisement -
vtv vitla

ಸುಳ್ಯ: ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಯುವತಿ ಮನೆಯವರ ವಿರೋಧವಿದ್ದ ಕಾರಣ ಯುವತಿಯೊಂದಿಗೆ ಮನೆ ಬಿಟ್ಟು ಹೋಗಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ವಿವಾಹವಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದ

ಗುತ್ತಿಗಾರಿನ ಬಾಕಿಲದ ಆನಂದ ಎಂಬವರ ಪುತ್ರ ಜಗದೀಶ್ ಮತ್ತು ದೇವಚಳ್ಳ ಗ್ರಾಮದ ಅಡ್ಡನಪಾರೆ ನಿವಾಸಿ ಜನಾರ್ದನ ಅವರ ಪುತ್ರಿ ಪ್ರತಿಮಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರೆನ್ನಲಾಗಿದೆ. ಆದರೆ ಮದುವೆಗೆ ಯುವತಿ ಮನೆಯವರ ತೀವ್ರ ವಿರೋಧವಿತ್ತು ಎನ್ನಲಾಗಿದೆ.

ಆದ್ದರಿಂದ ಮನೆ ಬಿಟ್ಟು ತೆರಳಿದ ವಧು ಮತ್ತು ವರ ಮಂಗಳೂರಿನಲ್ಲಿ ಮದುವೆಯಾಗಿದ್ದಾರೆ. ಇನ್ನು ಇತ್ತ ಯುವತಿಯ ತಾಯಿ ಸುಬ್ರಹ್ಮಣ್ಯ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ದೂರು ದಾಖಲಿಸಿದ್ದಾರೆ. ಆದರೆ ಸುಬ್ರಹ್ಮಣ್ಯ ಠಾಣೆಯನ್ನು ಸಂಪರ್ಕಿಸಿರುವ ವಧೂ-ವರರು ತಾವು ಮದುವೆ ಆಗಿರುವ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!