- Advertisement -
- Advertisement -
ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಕತ್ತು ಕೊಯ್ಯಲ್ಪಟ್ಟು ರಕ್ತ ಸ್ರಾವದಿಂದಾಗಿ ಸಾವಿಗೀಡಾದ ಬಗ್ಗೆ ವರದಿಯಾಗಿದೆ.
ರಾತ್ರಿ ವೇಳೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿ ಬಿದ್ದುಕೊಂಡಿರುವುದು ಗೊತ್ತಾಗಿ ಟಿ.ಸಿ.ಯವರು ಪೋಲೀಸರಿಗೆ ಮಾಹಿತಿ ನೀಡಿದರು. ಪೋಲೀಸರು ಬಂದು ನೋಡಿದಾಗ ಆ ವ್ಯಕ್ತಿ ಮೃತಪಟ್ಟಿರುವುದು ತಿಳಿದಿದೆ.
ಮೃತದೇಹದ ಬಳಿ ಬ್ಯಾಗ್ ನಲ್ಲಿ ಇದ್ದ ಆಧಾರ್ ಕಾರ್ಡ್ ನ ಆಧಾರದಲ್ಲಿ ಆ ವ್ಯಕ್ತಿ ಮಂಗಳೂರಿನ ಅಚ್ಚುತ ಎಂಬವರೆಂದು ತಿಳಿದುಬಂದಿದೆ. ಪೋಲೀಸರು ಮೃತದೇಹವನ್ನು ಕೆ.ವಿ.ಜಿ.ಆಸ್ಪತ್ರೆಗೆ ಕೊಂಡೊಯ್ದು ಶೈತ್ಯಾಗಾರದಲ್ಲಿ ಇರಿಸಿದ್ದಾರೆ.
ವ್ಯಕ್ತಿಯ ಸಾವು ಹೇಗೆ ಸಂಭವಿಸಿತೆಂಬುದು ಖಚಿತವಾಗಿಲ್ಲ. ಇದು ಕೊಲೆಯೇ ಆತ್ಮಹತ್ಯೆಯೇ ಅಥವಾ ಬೇರೆ ಏನಾದರೂ ಆಗಿ ಸಾವು ಸಂಭವಿಸಿರಬಹುದೇ ಎಂಬ ಪ್ರಶ್ನೆ ಮೂಡಿದೆ.
- Advertisement -