- Advertisement -
- Advertisement -
ಸುಳ್ಯ: ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಕುಡಿದ ಮತ್ತಿನಲ್ಲಿ ತಂದೆ ಮತ್ತು ಮಗನ ಮಧ್ಯೆ ಹೊಡೆದಾಟ ನಡೆದು ಮಗನಿಗೆ ಕತ್ತಿಯಿಂದ ಇರಿದ ಘಟನೆ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕ ಗುಂಡ್ಯ ನಿವಾಸಿ ಐತಪ್ಪ ನಾಯ್ಕ ಮತ್ತು ಅವರ ಮಗ ಜಯಪ್ರಕಾಶ್ ರವರ ಎನ್ನಲಾಗಿದೆ.
ಕುಡಿದ ಮತ್ತಿನಲ್ಲಿ ತಂದೆ ಮಗನ ಮಧ್ಯೆ ಮಾತಿನ ಚಕಮಕಿ ನಡೆದು ತಂದೆಯೇ ಮಗನ ಎದೆಗೆ ಕತ್ತಿಯಿಂದ ಕಡಿದು ಹಲ್ಲೆಗೊಳಿಸಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದರು. ಆದರೆ ವಿಪರೀತ ರಕ್ತಸ್ರಾವ ಆದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -