Sunday, June 29, 2025
spot_imgspot_img
spot_imgspot_img

ಸುಳ್ಯ : ಮಲಗಿದ್ದಲ್ಲೇ ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ: ಮನೆಯಲ್ಲಿ ಮಲಗಿದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ವ್ಯಕ್ತಿ ಪದ್ಮನಾಭ (50) ಎನ್ನಲಾಗಿದೆ.

ಪದ್ಮನಾಭ ಅವರು ಅಣ್ಣ ಶೇಖರ ಪೂಜಾರಿ ಅವರ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಎ.3ರಿಂದ ತರಕಾರಿ ಅಂಗಡಿಯನ್ನು ಬಾಗಿಲು ಹಾಕಿಕೊಂಡು ತಮ್ಮ ಬಾಡಿಗೆ ಮನೆಗೆ ಹೋಗಿದ್ದು, ಎ.4ರಂದು ಬೆಳಗ್ಗೆ, ಅಂಗಡಿಯ ಬಾಗಿಲು ತೆರೆಯಲು ಬಾರದೇ ಇದ್ದುದರಿಂದ ಶೇಖರ ಅವರು ಪದ್ಮನಾಭ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಕಾರಣ ಮನೆಯ ಹತ್ತಿರ ಹೋಗಿ ನೋಡಿದಾಗ ಬಾಗಿಲು ಹಾಕಿತ್ತು.

ಕಿಟಕಿಯಿಂದ ನೋಡಿದಾಗ ಪದ್ಮನಾಭ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿದ್ದರು. ಬಾಗಿಲನ್ನು ಮುರಿದು ಒಳಗೆ ಹೋಗಿ ನೋಡಿದಾಗ ಅವರು ಮೃತಪಟ್ಟಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

- Advertisement -

Related news

error: Content is protected !!