- Advertisement -
- Advertisement -
ಸುಳ್ಯ: ಮಾಜಿ ಗ್ರಾ.ಪಂ ಸದಸ್ಯ ತನ್ನ ಸ್ವಂತ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಳ್ಯದ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ಎನ್ನಲಾಗಿದೆ. ಇವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಭೋಜಪ್ಪರವರು ಅಡ್ತಲೆಯಲ್ಲಿ ಅಂಗಡಿ ನಡೆಸುತ್ತಿದ್ದು, ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
- Advertisement -