Sunday, May 5, 2024
spot_imgspot_img
spot_imgspot_img

ಸುಳ್ಯ: ಮೇಯಲು ಕಟ್ಟಿದ್ದ ಹೋರಿ ತಿವಿದು ವ್ಯಕ್ತಿ ಸಾವು..!

- Advertisement -G L Acharya panikkar
- Advertisement -
vtv vitla

ಸುಳ್ಯ: ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.11ರಂದು ಮುರುಳ್ಯದ ಕೋಡಿಯಡ್ಕದಲ್ಲಿ ನಡೆದಿದೆ. ಮೃತ ವ್ಯಕ್ತಿ ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ (55) ಎನ್ನಲಾಗಿದೆ.

ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು, ಸಂಜೆ ವೇಳೆ ಹೋರಿಯನ್ನು ಬಿಡಿಸಲು ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಹೋರಿ ತಿವಿದು ಗಂಭೀರವಾಗಿ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

vtv vitla

ಡಿ.12ರ ಭಾನುವಾರ ಬೆಳಗ್ಗೆ ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕದಲ್ಲಿ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದಾರೆ. ಹತ್ತಿರ ಹೋಗಿ ನೋಡುವಾಗ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನಂತರ ಮನೆಯವರಿಗೆ ವಿಷಯ ತಿಳಿಸಲಾಯಿತು. ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮೃತ ಶರೀರವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತರು ಅವಿವಾಹಿತರಾಗಿದ್ದು, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!