- Advertisement -
- Advertisement -
ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ಮಗು ಅದೃಷ್ಟವಶಾತ್ ಬದುಕುಳಿದಿದೆ.
ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎನ್ಎಂಸಿಯಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದರು. ಗೀತಾ ತನ್ನ 4 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮುಂಜಾನೆ ಎದ್ದಾಗ ಗೀತಾ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ಟರೂ ಸ್ವಾಗತಿಸುತ್ತೇನೆ -ಆರೋಪಿ ಫಯಾಜ್ ತಂದೆ ಕಣ್ಣೀರು
- ಕೋಟ್ರಗುತ್ತು: (ಎ.20-21) ಶ್ರೀ ವೈದ್ಯನಾಥ ಮತ್ತು ಪರಿವಾರ ದೈವಗಳ ನೂತನ ಭಂಡಾರಮನೆ ಪ್ರವೇಶ ಹಾಗೂ ಭಂಡಾರಗಳ ಪ್ರತಿಷ್ಠೆ ಕಲಶಾದಿಗಳು ಹಾಗೂ “ಹಸಿರು ಹೊರೆಕಾಣಿಕೆ”ಯ ವೈಭವದ ಮೆರವಣಿಗೆ
- ಬಜ್ಪೆ: ಲಾರಿ ಬ್ರೇಕ್ ಫೇಲ್ ಆಗಿ ಭೀಕರ ಸರಣಿ ಅಪಘಾತ
- ಉಡುಪಿ: ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24 ರಿಂದ ಪ್ರತಿಬಂಧಕಾಜ್ಞೆ ಜಾರಿ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
- Advertisement -