Friday, May 3, 2024
spot_imgspot_img
spot_imgspot_img

ಸೂತಕದಲ್ಲೂ ಮದುವೆ ಸಂಭ್ರಮ….ಮದುವೆ ವೇಳೆ ಹೃದಯಾಘಾತದಿಂದ ವಧು ಸಾವು – ತಂಗಿಗೆ ತಾಳಿ ಕಟ್ಟಿದ ವರ

- Advertisement -G L Acharya panikkar
- Advertisement -

ಗಾಂಧಿನಗರ: ವಧುವೊಬ್ಬಳು ಮದುವೆ ದಿನವೇ ಹೃದಯಘಾತದಿಂದ ಮೃತಪಟ್ಟಿದ್ದು, ಮೃತದೇಹವನ್ನು ಕೋಲ್ಡ್ ಸ್ಟೋರೇಜ್‍ನಲ್ಲಿಇಟ್ಟು ವರ ವಧುವಿನ ತಂಗಿಗೆ ತಾಳಿ ಕಟ್ಟಿದ ಘಟನೆ ಗುಜರಾತಿನ ಸುಭಾಷ್‍ನಗರದ ಭಾವನಗರದಲ್ಲಿ ನಡೆದಿದೆ.

ಭಾವನಗರದ ಭಗವಾನೇಶ್ವರ ಮಹಾದೇವ ದೇವಸ್ಥಾನದ ಮುಂಭಾಗದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಜಿನಾಭಾಯಿ ರಾಥೋಡ್ ಎಂಬವರ ಪುತ್ರಿ ಹೇತಾಲ್ ಹಾಗೂ ನಾರಿ ಗ್ರಾಮದ ರಾಣಾಭಾಯ್ ಬೂತಭಾಯ್ ಅಲ್ಗೋಟಾರ್ ಅವರ ಮಗ ವಿಶಾಲ್ ಅವರಿಬ್ಬರಿಗೂ ಮದುವೆ ನಡೆಯುತ್ತಿತ್ತು.

ಮದುವೆಯ ವಿಧಿವಿಧಾನಗಳನ್ನು ನಡೆಸುತ್ತಿದ್ದಾಗ ಹೇತಾಲ್ ತಲೆ ಸುತ್ತಿ ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಹೇತಾಲ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಹೇತಾಲ್‍ನ ಸಾವಿನಿಂದ ಕುಟುಂಬ ಶೋಕದಲ್ಲಿದ್ದರೂ ಮದುವೆಯ ಆಚರಣೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಹೇತಾಲ್‍ನ ತಂಗಿಗೆ ವರ ವಿಶಾಲ್ ತಾಳಿ ಕಟ್ಟಿದ್ದಾನೆ. ಸಮಾರಂಭ ಮುಗಿಯುವವರೆಗೂ ಹೇತಲ್ ಅವರ ಮೃತದೇಹವನ್ನು ಕೋಲ್ಡ್ ಸ್ಟೋರೇಜ್‍ನಲ್ಲಿ ಇಡಲಾಗಿತ್ತು ಎಂದು ವರದಿಯಾಗಿದೆ.

- Advertisement -

Related news

error: Content is protected !!