Sunday, May 5, 2024
spot_imgspot_img
spot_imgspot_img

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ಹಸ್ತಾಂತರ

- Advertisement -G L Acharya panikkar
- Advertisement -

ಬಂಟ್ವಾಳ: ಮಂಗಳೂರಿನ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ನೇತೃತ್ವದಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ಹಸ್ತಾಂತರಿಸಲಾಯಿತು.

ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಒಟ್ಟು 13 ನಲಿಕಲಿ ಟೇಬಲ್ ಗಳನ್ನು ಹಸ್ತಾಂತರಿಸಲಾಗಿದ್ದು, ಅವುಗಳಿಗೆ ಪೂರಕವಾಗುವಂತೆ ಕುರ್ಚಿಗಳನ್ನು ಒದಗಿಸುವ ಭರವಸೆಯನ್ನು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ನೀಡಿದರು.

ಈ ಸಂದರ್ಭ ಮುಖ್ಯ ಅತಿಥಿಯಾಗಿ ಮಾತನಾಡಿದ ವಿಎನ್ಆರ್ ಗೋಲ್ಡ್ ಮಾಲೀಕ ಬಿ.ನಾಗೇಂದ್ರ ಬಾಳಿಗಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಟ್ರಸ್ಟ್ ಕೋಶಾಧಿಕಾರಿ ಭಾಗ್ಯಶ್ರೀ ಭಂಡಾರ್ಕರ್, ಸದಸ್ಯ ಗಿರೀಶ್ ಪೈ, ಶಿಕ್ಷಣ ಇಲಾಖೆಯ ಸಿ.ಆರ್.ಪಿ. ಉಷಾ ಸುವರ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ, ಉಪಾಧ್ಯಕ್ಷೆ ಮಮತಾ, ಎಸ್.ಡಿ.ಎಂ.ಸಿ. ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಕುಶಲ ಎ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಪಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಹೇಮಾವತಿ ವಂದಿಸಿದರು. ಹಿರಿಯ ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು.

- Advertisement -

Related news

error: Content is protected !!