- Advertisement -
- Advertisement -
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
- ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ, ಮಾಲ್ ತೆರೆಯಲು ಅವಕಾಶ
- ಸರ್ಕಾರಿ, ಖಾಸಗಿ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಶೇಕಡ 100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು.
- ಮಾಲ್ ತೆರೆಯಲು ಅವಕಾಶ
- ಮೆಟ್ರೋ ಸೇರಿ ಸಾರ್ವಜನಿಕ ಸಾರಿಗೆ ಶೇಕಡ 100 ಪ್ರಯಾಣಿಕರೊಂದಿಗೆ ಕಾರ್ಯಾಚರಣೆ
- ಧಾರ್ಮಿಕ ಸ್ಥಳಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ
- ಮದುವೆ, ಕೌಟುಂಬಿಕ ಶುಭ ಕಾರ್ಯಕ್ರಮಗಳಲ್ಲಿ 100 ಜನರಿಗೆ ಅವಕಾಶ
- ಈಜುಕೊಳಗಳಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಅವಕಾಶ
- ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಪಟುಗಳ ಅಭ್ಯಾಸಕ್ಕೆ ಅವಕಾಶ
- ಅಂತ್ಯಸಂಸ್ಕಾರ 20 ಜನರಿಗೆ ಅವಕಾಶ ನೀಡಲಾಗಿದೆ.
ವೀಕೆಂಡ್ ಕರ್ಫ್ಯೂ ತೆರವು -ನೈಟ್ ಕರ್ಫ್ಯೂ ಜಾರಿ
- ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ
- ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
ಸಿನಿಮಾ/ಪಬ್ ಗೆ ಅವಕಾಶ ಇಲ್ಲ -ನಿಯಮ ಪಾಲನೆ ಕಡ್ಡಾಯ
- ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭ, ಪ್ರತಿಭಟನೆ ಇತರೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ
- ಶೈಕ್ಷಣಿಕ ಸಂಸ್ಥೆಗಳು ತೆರೆಯುವ ಪ್ರತ್ಯೇಕ ತೀರ್ಮಾನ ಮಾಡಲಾಗುವುದು
- ಪಬ್ ಗಳಿಗೆ ಅವಕಾಶ ಇಲ್ಲ, ಬಾರ್ ಗಳಿಗೆ ಅವಕಾಶ ನೀಡಲಾಗಿದೆ.
- ಚಿತ್ರಮಂದಿರಗಳ ಕಾರ್ಯನಿರ್ವಹಣೆಗೆ ಅವಕಾಶ ಇಲ್ಲ
- ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
- ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಸರ್ಕಾರದ ನಿಯಮ ಪಾಲಿಸಬೇಕಿದೆ.
15 ದಿನಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದರೆ ನಿರ್ಬಂಧ ಸಡಿಲಿಕೆ ಮಾಡಲಾಗುವುದು ಎಂದು ಹೇಳಲಾಗಿದೆ.
- Advertisement -