Friday, April 26, 2024
spot_imgspot_img
spot_imgspot_img

ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವು;

- Advertisement -G L Acharya panikkar
- Advertisement -
vtv vitla

ಶಿವಮೊಗ್ಗ : ಪಾರ್ಟಿಗೆಂದು ಹೋಗಿದ್ದ ಸುರೇಶ್(22) ಎನ್ನುವ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ನಗರದ ರೈಲ್ವೆ ಪ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಸಮೀಪದಲ್ಲಿ ಸ್ನೇಹಿತರಿಬ್ಬರು ಎಣ್ಣೆ ಪಾರ್ಟಿ ಮಾಡಿದ್ದರು. ಹೀಗೆ ಪಾರ್ಟಿಯಲ್ಲಿ ಎಣ್ಣೆ ಕುಡಿಯುತ್ತ ಕುಳಿತಿದ್ದ ಸುರೇಶ್​ನಿಗೆ, ವೇಗವಾಗಿ ಫಲ್ಸರ್ ಬೈಕ್​ನಲ್ಲಿ ಬಂದು ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದಾನೆ. ಈ ವೇಳೆ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸುರೇಶ್ ಮೃತಪಟ್ಟಿದ್ದಾನೆ. ಸುರೇಶ್​ ಶಿವಮೊಗ್ಗದ ಶರಾವತಿ ನಗರದಲ್ಲಿ ತನ್ನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದನು. ಈತನ ಪೋಷಕರು ಚಿಕ್ಕಮಗಳೂರಿನ ಕಡೂರಿನಲ್ಲಿ ವಾಸವಾಗಿದ್ದಾರೆ. ಈತನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದನು. ಈ ಕುರಿತು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನು ಮೃತ ಸುರೇಶ್​ ಮೈಮೇಲೆ ಅಪಘಾತದ ಯಾವುದೇ ದೊಡ್ಡ ಗಾಯಗಳಿಲ್ಲ. ಈ ನಡುವೆ ಆತ ಹೇಗೆ ಮೃತಪಟ್ಟನು ಎನ್ನುವ ಅನುಮಾನ ಮೃತನ ಕುಟುಂಬಸ್ಥರಿಗೆ ಕಾಡುತ್ತಿದೆ. ಮನೆಗೆ ಆಸರೆ ಆಗಬೇಕಿದ್ದ ಮಗನು ಸಾವಿನ ಮನೆ ಸೇರಿದ್ದು, ಹೆತ್ತವರು ಅನಾಥವಾಗಿದ್ದಾರೆ. ಆ ದಿನ ನಡೆದ ಘಟನೆಯಲ್ಲಿ ಸುರೇಶ್​ನ ತಲೆ ಮತ್ತು ಮತ್ತು ಭುಜಕ್ಕೆ ಸಣ್ಣ ಪುಟ್ಟ ಗಾಯವಾಗಿವೆ. ಅಪಘಾತವಾಗುತ್ತಿದ್ದಂತೆ ಬೈಕ್ ಸವಾರ ಸುರೇಶ್​ನನ್ನು ಆಟೋದಲ್ಲಿ ಆಸ್ಪತ್ರೆಗೆ ಕಳುಹಿಸಿ. ಆಸ್ಪತ್ರೆ ಬಳಿ ಬರುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಈ ಘಟನೆ ನಡೆದಿದ್ದು ಆಕಸ್ಮಿಕವೋ ಆಥವಾ ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆಯೋ ಎನ್ನುವ ಅನುಮಾನಗಳು ಶುರುವಾಗಿದೆ.

- Advertisement -

Related news

error: Content is protected !!