Monday, May 6, 2024
spot_imgspot_img
spot_imgspot_img

ಹನಿ ಟ್ರ್ಯಾಪ್ ಸುಳಿಯಲ್ಲಿ ಸಿಲುಕಿದ ಚಿನ್ನದ ಉದ್ಯಮಿ; ದೂರು ದಾಖಲು

- Advertisement -G L Acharya panikkar
- Advertisement -

ದ.ಕ ಮೂಲದ ಚಿನ್ನದ ಉದ್ಯಮಿಯೊಬ್ಬರು ಹನಿ ಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಪೊಲೀಸ್ ದೂರು ದಾಖಲಿಸಿದ್ದಾರೆ. ಮಂಡ್ಯದಲ್ಲಿ ಶ್ರೀನಿಧಿ ಗೋಲ್ಡ್ ಆಭರಣ ಅಂಗಡಿಯ ಮಾಲೀಕರಾಗಿರುವ ಜಗನ್ನಾಥ ಶೆಟ್ಟಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರುದಾರ ಜಗನ್ನಾಥ ಶೆಟ್ಟಿ ಅವರಿಂದ ಆರೋಪಿಗಳು 50 ಲಕ್ಷ ರೂಪಾಯಿ ಪಡೆದಿದ್ದು, 6 ತಿಂಗಳ ಬಳಿಕ ದೂರು ನೀಡಿದ್ದಾರೆ. ಜಗನ್ನಾಥ ಶೆಟ್ಟಿ ದೂರು ಆಧರಿಸಿ ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾ ಭಾನು ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 26ರಂದು ಮೈಸೂರಿನಲ್ಲಿ ಹನಿಟ್ರ್ಯಾಪ್ ಕೃತ್ಯ ಎಸಗಿದ್ದು, ಮಂಗಳೂರಿಗೆ ತೆರಳಲು ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಜಗನ್ನಾಥ್ ಶೆಟ್ಟಿ ಅವರನ್ನು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ನಾಲ್ವರು ಕರೆದೊಯ್ದಿದ್ದರು ಎಂದು ಹೇಳಲಾಗಿದೆ.

- Advertisement -

Related news

error: Content is protected !!