Sunday, May 5, 2024
spot_imgspot_img
spot_imgspot_img

ಹಳೆಯಂಗಡಿ: ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ; ಮಹಿಳೆ ಗಂಭೀರ..

- Advertisement -G L Acharya panikkar
- Advertisement -

ಹಳೆಯಂಗಡಿ: ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆಯಲ್ಲಿ ಬಳಿ ನಡೆದಿದೆ.

ಮಂಗಳೂರಿನ ನಿವಾಸಿ ಸರಸ್ವತಿ ಗಂಭೀರ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ.

ಸರಸ್ವತಿ ತಮ್ಮ ಪತಿಯೊಂದಿಗೆ ಬಪ್ಪನಾಡು ದೇವಸ್ಥಾನಕ್ಕೆ ರಿಕ್ಷಾದಲ್ಲಿ ಆಗಮಿಸುತ್ತಿದ್ದಾಗ ರಿಕ್ಷಾಗೆ ಉಡುಪಿಯತ್ತ ತೆರಳುತ್ತಿದ್ದ ಮುಂಬೈ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಲಾರಿಯು ಮುಂಬೈ ಬಸ್ಸಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

- Advertisement -

Related news

error: Content is protected !!