Monday, May 6, 2024
spot_imgspot_img
spot_imgspot_img

ಹಾಡಹಗಲೇ ಗುಂಡಿನ ದಾಳಿ; ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವು..!

- Advertisement -G L Acharya panikkar
- Advertisement -
vtv vitla

ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತರನ್ನ ಪ್ರಕಾಶ್ (30) ಹಾಗೂ ಪ್ರವೀಣ್ (33) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ರಮೇಶ್, ಪ್ರಕಾಶ್, ಪ್ರವೀಣ್ ಮೂವರು ಸಂಬಂಧಿಕರು ಎಂದು ಹೇಳಲಾಗುತ್ತಿದ್ದು, ಗುಂಡಿನ ದಾಳಿ ನಡೆಸಿದ ರಮೇಶ್‌ಗೆ ಬಂದೂಕು ಎಲ್ಲಿಂದ ಸಿಕ್ಕಿತ್ತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿರುವ ಬಾಳೆಹೊನ್ನೂರು ಪೊಲೀಸರು ಆತ ನಿಜಕ್ಕೂ ಮಾನಸಿಕ ಅಸ್ವಸ್ಥನಾ, ಗುಂಡಿನ ದಾಳಿ ಹಿಂದೆ ಬೇರೆ ಕಾರಣ ಇದೆಯಾ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಆರೋಪಿ ರಮೇಶ್‌ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!