ಶರಣರನಾಡಲ್ಲಿ ರಕ್ತದೋಕುಳಿ ಹರಿದಿದೆ. ಹಳೇದ್ವೇಷಕ್ಕಾಗಿ ಯುವಕನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶರಣರನಾಡಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಹಾಡಹಗಲೇ ಭೀಕರ ತಾಯಿಯ ಕಣ್ಣೆದುರೇ ಹತ್ಯೆ ಘಟನೆ ನಡೆದಿದೆ. ಆನಂದ ಪುಲೆ ಮೃತ ಪಟ್ಟ ಯುವಕ. ಬಸವಕಲ್ಯಾಣದ ತ್ರಿಪುರಾಂತ ನಿವಾಸಿಯಾದ ಆನಂದ ಪುಲೆ ತಾಯಿಯ ಜೊತೆ ಹೋಗುತ್ತಿದ್ದಾಗ ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ್ದಾನೆ. ಈ ಭೀಕರ ದೃಶ್ಯವನ್ನ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಹಲ್ಲೆ ಮಾಡಿದ ಬಳಿಕ ದುಷ್ಕರ್ಮಿ ಘಟನಾ ಸ್ದಳ ದಿಂದ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆನಂದ ಪುಲೆ ದೇಹದ ಮುಂದೆ ತಾಯಿ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಹಲ್ಲೆಯಿಂದ ಗಾಯಗೊಂಡಿದ್ದ ಯುವಕನ್ನನ್ನು ಕೂಡಲೇ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿತ್ತು . ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರದ ಉಮ್ಮರಗಾ ಆಸ್ಪತ್ರೆಗೆ ರವಾನೆ ಮಾಡುವಾಗ ಮಾರ್ಗ ಮಧ್ಯೆಸಾವನ್ನಪ್ಪಿದ್ದಾನೆ.
ಹೀಗೆ ಭೀಕರವಾಗಿ ಕೊಲೆಯಾಗಿರುವ ಆನಂದ ಪುಲೆ, ಕ್ಷೇತ್ರದ ಶಾಸಕ ಶರಣು ಸಲಗಾರ ಆಪ್ತ ಎಂದು ಹೇಳಲಾಗುತ್ತಿದೆ. ಡಿಜೆ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ಈತ ಇತ್ತಿಚೇಗೆ ಶರಣು ಸಲಗಾರ ಜೊತೆಗೆ ಓಡಾಡ್ತಿದ್ದಂತೆ. ಸದ್ಯ ಹಳೆ ವೈಷಮ್ಯದ ಹಿನ್ನೆಲೆ ಈತನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ