Sunday, May 5, 2024
spot_imgspot_img
spot_imgspot_img

ಹಾಸನ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ; ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

- Advertisement -G L Acharya panikkar
- Advertisement -

ಹಾಸನ: ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ದಿ.ಗಣಪ ಗೌಡರ ಮಕ್ಕಳಾದ ಅಣ್ಣ ಜಯಪ್ರಕಾಶ್(25), ತಮ್ಮ ಯೋಗಿಶ್(23) ಸಾವನ್ನಪ್ಪಿದವರು. ಇನ್ನುಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ. ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ವಿಡ್ ಕಾರಿನಲ್ಲಿ ನಾಲ್ಕೂ ಜನ ಪ್ರಯಾಣ ಮಾಡಿದ್ದಾರೆ. ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೆ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!