Thursday, May 2, 2024
spot_imgspot_img
spot_imgspot_img

ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿ ಆರೋಪ; ನಟ ಚೇತನ್ ಅಹಿಂಸಾ ಅರೆಸ್ಟ್..!

- Advertisement -G L Acharya panikkar
- Advertisement -

’ಆ ದಿನಗಳು’ ಖ್ಯಾತಿಯ ನಟ ಚೇತನ್ ಮತ್ತೆ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ರನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಚೇತನ್ ಮೇಲಿತ್ತು. ಈ ಸಂಬಂಧ ದೂರು ದಾಖಲಾಗಿತ್ತು. ಹೀಗಾಗಿ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ರನ್ನು ಬಂಧಿಸಲಾಗಿದೆ.

ಹಿಂದುತ್ವದ ಬಗ್ಗೆ ನಟ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು. ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಚೇತನ್ ವಿರುದ್ಧ ಹಿಂದೂ ಪರ ಸಂಘಟನೆಗಳು ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು. ಸದ್ಯ, ಚೇತನ್ ರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ.

ಚೇತನ್ ಪೋಸ್ಟ್ ಮಾಡಿದ್ದೇನು?
ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಅಹಿಂಸಾ ಪೋಸ್ಟ್ ಮಾಡಿದ್ದರು. “ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತ ದೇಶ ಪ್ರಾರಂಭವಾಯಿತು ಎಂಬ ಸಾರ್ವರ್ಕರ್ ಹೇಳಿಕೆ ಸುಳ್ಳು. ಬಾಬರಿ ಮಸೀದಿ ರಾಮನ ಜನ್ಮಭೂಮಿ ಎಂಬುದು ಕೂಡ ಸುಳ್ಳು. ಇದೀಗ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎಂಬ ಹೇಳಿಕೆ ಹರಿದಾಡುತ್ತಿದ್ದು, ಇದು ಕೂಡ ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಅವರು ಪೋಸ್ಟ್ ಮಾಡಿದ್ದರು.

- Advertisement -

Related news

error: Content is protected !!