- Advertisement -
- Advertisement -
ಹಿಂದೂ ಕಾರ್ಯಕರ್ತರ ಸಾಲು ಸಾಲು ಹತ್ಯೆಗಳು ರಾಜ್ಯದಲ್ಲಿ ನಡೆಯುತ್ತಿದ್ದು, ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದಾರೆ. ಈಗಾಗಲೇ ಸ್ಥಾಪನೆಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.
ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ ಪಕ್ಷವಾಗಿ ನೋಂದಣಿಯಾಗಿರುವ ಈ ಪಾರ್ಟಿ ರಾಜ್ಯದಲ್ಲಿ ಸಕ್ರಿಯವಾಗಿಲ್ಲ. ಆದರೆ, ಇತ್ತೀಚೆಗೆ ಹಿಂದೂ ಕಾರ್ಯಕರ್ತರ ಕೊಲೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯಿಂದ ಹಿಂದೂಗಳಿಗೆ ರಕ್ಷಣೆಯಿಲ್ಲ ಎನ್ನುವ ಭಾವನೆ ಜನರಲ್ಲಿ ಮೂಡಿದೆ. ಬಿಜೆಪಿ ಅಧಿಕಾರದಲ್ಲಿದ್ದರೂ, ಹಿಂದೂಗಳ ರಕ್ಷಣೆ ಮಾಡದಿರುವ ಬಗ್ಗೆ ಹಿಂದೂ ಸಂಘಟನೆಗಳು ಅಸಮಾಧಾನ ಹೊರ ಹಾಕಿದ್ದರು.
ಆಗಸ್ಟ್ 7 ರಂದು ಹಿಂದೂಸ್ಥಾನ ಜನತಾ ಪಾರ್ಟಿ ಬೆಂಗಳೂರಿನಲ್ಲಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ.
- Advertisement -