Saturday, April 27, 2024
spot_imgspot_img
spot_imgspot_img

ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಶಾಫಿ ಬೆಳ್ಳಾರೆ ಎನ್ಐಎ ವಶಕ್ಕೆ

- Advertisement -G L Acharya panikkar
- Advertisement -

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ.

ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಒಟ್ಟು ಮೂವರನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

Related news

error: Content is protected !!