Thursday, May 2, 2024
spot_imgspot_img
spot_imgspot_img

ಹಿಜಾಬ್ ತಂಟೆಗೆ ಬಂದ್ರೆ ಕತ್ತರಿಸುತ್ತೇನೆ ಎಂದಿದ್ದ ಕಾಂಗ್ರೆಸ್​ ಮುಖಂಡ ಮುಕ್ರಂ ಖಾನ್ ಪೊಲೀಸರ ವಶಕ್ಕೆ

- Advertisement -G L Acharya panikkar
- Advertisement -

ಕಲಬುರ್ಗಿ: ಹಿಜಾಬ್ ತಂಟೆಗೆ ಬಂದವರನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್’ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿವಾವಾದಾತ್ಮಕ ಹೇಳಿಕೆ ಹಾಗೂ ಬೆದರಿಕೆಯೊಡ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರೂ ಆಗಿರುವ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್, ಹಿಜಾಬ್ ತಂಟೆಗೆ ಬಂದ್ರೆ ತುಕಡೆ ತುಕಡೆ ಮಾಡ್ತಿವಿ ಎಂದು ಹೇಳಿಕೆ ನೀಡಿ ಬೆದರಿಕೆಯೊಡ್ದಿದ್ದರು. ಈ ಹಿನ್ನೆಲೆಯಲ್ಲಿ ಮುಕ್ರಂ ಖಾನ್ ವಿರುದ್ಧ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್, ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು. ಜಾಮೀನು ಅರ್ಜಿ ತಿರಸ್ಕಾರಗೊಂಡಿದ್ದು, ಇದೀಗ ಮುಕ್ರಂ ಅವರನ್ನು ಹೈದರಾಬಾದ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಕ್ರಂ ಖಾನ್​​ಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಹೈದರಾಬಾದ್​ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!