- Advertisement -
- Advertisement -
ಕುಂದಾಪುರ: ಕುಂದಾಪುರದ ಆರ್ ಎನ್ ಶೆಟ್ಟಿ ಕಾಲೇಜಿನ ಪ್ರಿನ್ಸಿಪಾಲರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ ಮೊಹಮ್ಮದ್ ಶಬೀರ್ ಬಂಧಿತ ಆರೋಪಿ.
ಹಿಜಾಬ್ ಹಾಕಲು ಅವಕಾಶ ನೀಡದಿದ್ದರೆ ನಿನ್ನನ್ನು, ಹೆಂಡತಿ ಮಕ್ಕಳನ್ನು ಕೊಲ್ಲುತ್ತೇನೆ ಎಂದು ಪ್ರಾಂಶುಪಾಲರಿಗೆ ಬೆದರಿಕೆವೊಡ್ಡಿದ್ದನು ಮೊಹಮ್ಮದ್ ಶಮೀರ್. ಇಂಟರ್ನೆಟ್ ಕರೆಯ ಮೂಲಕ ಬೆದರಿಕೆ ಹಾಕಿದ್ದ ದುಷ್ಕರ್ಮಿಯ ಕರೆಯ ಜಾಡು ಹಿಡಿದು ಬಂಧಿಸಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -