Saturday, April 27, 2024
spot_imgspot_img
spot_imgspot_img

ಹಿಜಾಬ್ ವಿವಾದ: ಕಾಲೇಜಿನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಾಟ; ಇನ್ನೊಂದೆಡೆ ಕಲ್ಲು ತೂರಾಟ

- Advertisement -G L Acharya panikkar
- Advertisement -

ಹಿಜಾಬ್ ವಿವಾದದ ಅರ್ಜಿ ವಿಚಾರಣೆ ಇಂದು ಕೋರ್ಟ್ ನಲ್ಲಿ‌ ನಡೆಯುತ್ತಿರುವ ಬೆನ್ನಲ್ಲೇ ಶಿವಮೊಗ್ಗದ ಕಾಲೇಜಿನಲ್ಲಿ‌ನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ಘಟನೆ ವರದಿಯಾಗಿದೆ.

ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರಲು ಅವಕಾಶ ನೀಡುವುದಾದರೆ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸಿಕೊಂಡು ಬರಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಬಳಿಕ ಸರ್ಕಾರಿ ಕಾರ್ಯಕ್ರಮದ ವೇಳೆ ತ್ರಿವರ್ಣ ಧ್ವಜ ಹಾರಿಸುವ ಶಾಲಾ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದಾರೆ. ಇದರಿಂದಾಗಿ ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಬಾಗಲಕೋಟೆಯ ಕಾಲೇಜಿನಲ್ಲಿ ಕಲ್ಲು ತೂರಾಟ: ವಿದ್ಯಾರ್ಥಿಗೆ ಗಾಯ
ಬಾಗಲಕೋಟೆಯಲ್ಲಿ ರಬಕವಿ ಬನಹಟ್ಟಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಘಟನೆಯಲ್ಲಿ
ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ನಡೆದಿದೆ.

vtv vitla
vtv vitla
- Advertisement -

Related news

error: Content is protected !!