- Advertisement -
- Advertisement -
ಹೆಬ್ರಿ: ಅಪಾಯಕಾರಿ ತಿರುವಿನಲ್ಲಿ ಬೈಕ್ ಸವಾರನೋರ್ವ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದು ಹಿಂದಿನಿಂದ ಬರುತ್ತಿದ್ದ ಲಾರಿಯಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ವರಂಗ ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿ ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎನ್ನಲಾಗಿದೆ.
ಬೈಕ್ ಸವಾರ ಬುಧವಾರ ಸಂಜೆ ವೇಳೆಗೆ ಕಾರ್ಕಳ ಕಡೆಯಿಂದ ಹೆಬ್ರಿ ಮಾರ್ಗವಾಗಿ ಸಾಗರಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಅವರ ಮೇಲೆ ಲಾರಿ ಚಲಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -