Sunday, June 29, 2025
spot_imgspot_img
spot_imgspot_img

ಹೆಬ್ರಿ: ಹೊಳೆಗೆ ಸ್ನಾನ ಮಾಡಲು ಹೋದ ಯುವಕ ಕಾಲು ಜಾರಿ ಬಿದ್ದು ನೀರುಪಾಲು

- Advertisement -
- Advertisement -
astr

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ನಡೆದಿದೆ.

ಮೃತ ಯುವಕ ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್ ರಾಜ್(28) ಎಂದು ಗುರುತಿಸಲಾಗಿದೆ.

ಇವರು ತನ್ನ ಸಂಬಂಧಿಕರೊಂದಿಗೆ ವರಂಗ ಗ್ರಾಮದ ತಲಮನೆಯ ಹೊಳೆಯ ಬದಿಯಲ್ಲಿರುವ ಕಲ್ಲಿನ ಬಂಡೆಯ ಮೇಲೆ ಪಾರ್ಟಿ ಮಾಡುತ್ತಿರುವಾಗ ಪವನ್ ರಾಜ್ ಸಂಜೆ ಹೊಳೆಯಲ್ಲಿ ಸ್ನಾನ ಮಾಡಲು ಹೋದವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!