ಕಾರು ಸೇತುವೆಯಿಂದ ಕೆಳಗೆ ಬಿದ್ದು ಇಬ್ಬರು ಯುವಕರು ನೀರುಪಾಲಾಗಿದ್ದಾರೆ..!? ಆದ್ರೆ ಬಲ್ಲ ಮೂಲಗಳು ಅಪಘಾತದ ಬಳಿಕ ಯುವಕರು ಮನೆಯವರಿಗೆ ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕರೆ ಮಾಡಿದ್ದ ಆ ನಂಬರ್ ಟ್ರೇಸ್ ಮಾಡುತ್ತಿರುವ ಪೊಲೀಸರಿಗೆ ಈ ಇಬ್ಬರು ಇಲ್ಲೇ ಎಲ್ಲೋ ಇರಬಹುದು ಎಂದು ಶಂಕಿಸಿದ್ದಾರೆ.
ಕಡಬ: ಸೇತುವೆಗೆ ಡಿಕ್ಕಿ ಹೊಡೆದ ಕಾರು ಹೊಳೆಗೆ ಉರುಳಿಬಿದ್ದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹೊಳೆಯಲ್ಲೂ ಸಿಗದೇ ಕಾರಿನಲ್ಲೂ ಇಲ್ಲದ ಈ ಯುವಕರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂಬ ಅನುಮಾನ ಒಂದೆಡೆಯಾದರೆ ಅಪಘಾತದ ಬಳಿಕ ಮನೆಯವರಿಗೆ ಕರೆ ಮಾಡಿದ್ದಾರೆ ಎಂಬ ಮಾಹಿತಿ ಇನ್ನಷ್ಟು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಯುವಕರು ಎಲ್ಲಿಗೆ ಹೋಗಿರುವುದ್ದಾರೆ ಎಂಬ ಅನುಮಾನ ಮನೆ ಮಾಡಿದೆ.
ಈ ನಡುವೆ ಯುವಕರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಿಂದ ಹೊಳೆಯಲ್ಲಿ ಕಾರು ಬಿದ್ದಿರುವುದು ಭಾನುವಾರ ಬೆಳಗ್ಗೆ ತಿಳಿದುಬಂದಿತ್ತು, ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರಿಗೆ ಸಿಕ್ಕಿದ್ದು ನುಜ್ಜುಗುಜ್ಜಾದ ಕಾರು ಮಾತ್ರ. ಇಡೀ ಹೊಳೆಯನ್ನೇ ಜಾಲಾಡಿದರೂ, ಈ ಯುವಕರು ಪತ್ತೆಯಾಗಲೇ ಇಲ್ಲದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಕರಣದ ಬೆನ್ನತ್ತಿರುವ ಪೊಲೀಸರಿಗೆ ಅಪಘಾತದ ಬಳಿಕ ಈ ಯುವಕರು ಅವರ ಮನೆಯವರಿಗೆ ಕರೆ ಮಾಡಿರುವುದು ತಿಳಿದುಬಂದಿದೆ. ಕರೆ ಮಾಡಿದ್ದ ಆ ನಂಬರ್ ಟ್ರೇಸ್ ಮಾಡುತ್ತಿರುವ ಪೊಲೀಸರಿಗೆ ಈ ಇಬ್ಬರು ಇಲ್ಲೇ ಎಲ್ಲೋ ಇರಬಹುದು ಎಂದು ಶಂಕಿಸಿದ್ದಾರೆ.
ಅಂದರೆ ಇಬ್ಬರು ಅಪಘಾತದ ವೇಳೆ ಕಾರಿನಲ್ಲಿದ್ದಾರಾ ಅಥವಾ ನಂತರ ತಪ್ಪಿಸಿಕೊಂಡು ಹೊರ ಬಂದಿದ್ದಾರೆಯೇ ಎಂಬುದು ಮಾತ್ರ ಯುವಕರ ಸಿಕ್ಕ ಬಳಿಕವೇ ಇದಕ್ಕೆ ಉತ್ತರ ಸಿಗಲಿದೆ. ಆದರೆ ಈ ಇಬ್ಬರು ಭಯದಿಂದ ಎಲ್ಲಾದರೂ ಅಡಗಿಕೊಂಡಿರಬಹುದು ಎಂದೂ ಹೇಳಲಾಗುತ್ತಿದ್ದು, ಸದ್ಯ ನಂಬರ್ ಟ್ರೇಸ್ ಮಾಡಿರುವ ಪೊಲೀಸರಿಗೆ ಸ್ಥಳದ ಕುರಿತು ಮಾಹಿತಿ ಸಿಕ್ಕಿದೆ ಎಂದು ತಿಳಿದುಬಂದಿದೆ. ಸದ್ಯ ತನಿಖೆ ಚುರುಕುಗೊಂಡಿದೆ.