Sunday, April 28, 2024
spot_imgspot_img
spot_imgspot_img

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಆರೋಪಿ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ

- Advertisement -G L Acharya panikkar
- Advertisement -
This image has an empty alt attribute; its file name is mgr-corporation-796x1024.jpeg

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ವಿಚಾರಣೆಯನ್ನು ಎನ್‌ಐಎ ತೀವ್ರಗೊಳಿಸಿದೆ. ಈ ಮಧ್ಯೆ ಆರೋಪಿ ಫೋಟೋ ಬಿಡುಗಡೆ ಮಾಡಿರುವ ಎನ್‌ಐಎ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.

ಪ್ರಕರಣದ ತನಿಖೆ ವಹಿಸಿಕೊಳ್ಳುವ ಮುನ್ನವೇ ಸಿಸಿಬಿ ನಡೆಸಿದ್ದ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಾಂಬರ್ ಫೋಟೋ ಹಂಚಿಕೊಂಡಿರುವ ಎನ್‌ಐಎ ಅಧಿಕಾರಿಗಳು, ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡಲಾಗುತ್ತದೆ ಹಾಗೂ ಮಾಹಿತಿದಾರರು ನೀಡಿದ ಯಾವುದೇ ಮಾಹಿತಿಯನ್ನು ಸಾರ್ವಜನಿಕವಾಗಿ ಹಂಚಿಕೊಳ್ಳದೇ ಗೌಪ್ಯವಾಗಿಡಲಾಗುತ್ತದೆ ತಿಳಿಸಿದ್ದಾರೆ. ಇದೀಗ ಆ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ತಿಳಿದರೆ ಕೂಡಲೇ 080-29510900, 8904241100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಎನ್ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

- Advertisement -

Related news

error: Content is protected !!