ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ದೇಶಕ್ಕೆ ಹಾಗೂ ರೈತರಿಗೆ ಒಳಿತಾಗಬೇಕೆಂದು ಪಾದಯಾತ್ರೆ ಮೂಲಕ ಮಲೈ ಮಹದೇಶ್ವರ ಬೆಟ್ಟವನ್ನು ಊರುಗೋಲು ಹಿಡಿದ 102 ವರ್ಷದ ಅಜ್ಜಿಯೊಬ್ಬರು ಹತ್ತಿದ್ದಾರೆ . ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತುಮಕೂರಿನ ತಿಪಟೂರು ಮೂಲದ ಶತಾಯುಷಿ 102 ವರ್ಷದ ಪಾರ್ವತಮ್ಮ ಎಂಬುವವರು ಪಾದಯಾತ್ರೆ ಮೂಲಕ ಬೆಟ್ಟ ಹತ್ತಿದ್ದಾರೆ. ದೇಶಕ್ಕೆ ಒಳಿತಾಗಬೇಕು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಜತೆಗೆ ರೈತರು ಬೆಳೆದ ಬೆಳೆಯು ಉತ್ತಮ ಫಸಲು ಕೊಡುವಂತಾಗಲಿ. ಯಾವುದೇ ಸಾಂಕ್ರಾಮಿಕ ಕಾಯಿಲೆಗಳು ಬಾರದಿರಲಿ ಎಂದು ಮಾದಪ್ಪನನ್ನು ಪ್ರಾರ್ಥಿಸಿದರು.
ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಭಕ್ತ ಸಾಗರವೇ ಹರಿದು ಬರುತ್ತಿದೆ. ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರು ಬಿಸಿಲನ್ನು ಲೆಕ್ಕಿಸದೆ ಪಾದಯಾತ್ರೆ ಕೈಗೊಂಡಿದ್ದಾರೆ.
ಮಹದೇಶ್ವರ ದೇವರ ದರ್ಶನಕ್ಕಾಗಿ ತಲಾ ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ 18 ಕಿ.ಮೀ ಪಾದಯಾತ್ರೆ ನಡೆಸಿದವರು. ಮಳೆಗಾಗಿ ಪ್ರಾರ್ಥಿಸಲು ಪಾದಯಾತ್ರೆ ಕೈಗೊಳ್ಳುತ್ತಿರುವುದಾಗಿಯೂ ಮಹಿಳೆ ತಿಳಿಸಿದ್ದಾರೆ. ಮಳೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ, ಬೆಳೆ ಇಲ್ಲದೆ ರೈತರು ಜೀವನ ನಡೆಸುವುದು ಕಷ್ಟವಾಗಿದೆ, ಜಾನುವಾರುಗಳು ನೀರಿಗಾಗಿ ಪರಿತಪಿಸುತ್ತಿವೆ. ಕಾಡಿನಲ್ಲಿ ಪ್ರಾಣಿಗಳಿಗೆ ನೀರಿಲ್ಲ. ಎಲ್ಲರೂ ಚೆನ್ನಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ