Wednesday, May 8, 2024
spot_imgspot_img
spot_imgspot_img

144 ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಬುಕ್ ಆಫ್ ರೆಕಾರ್ಡ್ ಮಾಡಿದ ಯುವಕ

- Advertisement -G L Acharya panikkar
- Advertisement -
This image has an empty alt attribute; its file name is Bajaj-add-1024x718.jpg

ಇತ್ತೀಚೆಗೆ ಗ್ರಾಮೀಣ ಭಾಗದ ಯುವಕರು ತಾವು ಯಾರಿಗೂ ಕಮ್ಮಿಯಿಲ್ಲ ಎಂಬಂತೆ ತಮ್ಮ ಪ್ರತಿಭೆಗಳನ್ನು ಎತ್ತಿ ತೋರಿಸುತ್ತಿದ್ದಾರೆ. ಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಯುವಕನೊಬ್ಬ ಮೈಕ್ರೋ ಆರ್ಟ್ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾನೆ.

ಪರಮೇಶ ಬಂಡಿ ಎಂಬ ಯುವಕ ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಈ ಸಾಧನೆ ಮಾಡಿದ್ದಾನೆ. 80 ನಿಮಿಷದಲ್ಲಿ 144 ಅಕ್ಕಿಕಾಳಿನಿಂದ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ ಆಫ್ ಇಂಡಿಯಾ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಡೆಯುವ ಮೂಲಕ ಹೊಸ ಇತಿಹಾಸ ಬರೆದಿದ್ದಾನೆ.

ಅಷ್ಟೇ ಅಲ್ಲದೇ 92 ಅಕ್ಕಿಕಾಳಿನಲ್ಲಿ ವಂದೇ ಮಾತರಂ ಗೀತೆ ಬರೆದಿದ್ದಾನೆ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಗೆ 10 ರಿಂದ 20 ಸಾವಿರ ಅಕ್ಕಿಕಾಳಿನಲ್ಲಿ ಜೈ ಶ್ರೀ ರಾಮ್ ಎಂದು ಬರೆಯಲು ತಯಾರಿ ನಡೆಸಿದ್ದಾನೆ.

ಈ ಮೈಕ್ರೋ ಆರ್ಟ್ ಕಲಾವಿದನ ಸಾಧನೆ ನಿಜಕ್ಕೂ ನೋಡುಗರ ಗಮನ ಸೆಳೆಯುತ್ತಿದೆ. ಅದರಲ್ಲೂ ಅಕ್ಕಿಕಾಳಿನಲ್ಲಿ ಬರೆಯುವುದು ಸುಲಭದ ಮಾತಲ್ಲ. ಅಕ್ಕಿ ಕಾಳಿನಲ್ಲಿ ತನ್ನ ಕೈಚಳಕವನ್ನು ತೋರಿಸಿದ್ದಾನೆ. ಓದಿದ್ದು ಪಿಯುಸಿ ಆದರೂ ಮೈಕ್ರೋ ಆರ್ಟ್ ಮೂಲಕ ಹೆಸರು ಮಾಡಿದ್ದಾನೆ.

- Advertisement -

Related news

error: Content is protected !!