ನೆಲಮಂಗಲ: 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ ಕುಖ್ಯಾತ ಸರಗಳ್ಳನ ಮೇಲೆ ಗುಂಡು ಹಾರಿಸಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆ ನೆಲಮಂಗಲದ ಬಿನ್ನಮಂಗಲದ ಬಳಿ ನಡೆದಿದೆ.
ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ ಕುಖ್ಯಾತ ಸರಗಳ್ಳನ ಮೇಲೆ ಗುಂಡು ಹಾರಿಸಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆ ನೆಲಮಂಗಲದ ಬಿನ್ನಮಂಗಲದ ಬಳಿ ನಡೆದಿದೆ.
ನೆಲಮಂಗಲ ಟೌನ್ ಸಿಪಿಐ ಶಶಿಕುಮಾರ್ ಕುಖ್ಯಾತ ಸರಗಳ್ಳ ಯೋಗ ಯೋಗಾನಂದ್ (31) ಮೇಲೆ ಗುಂಡುಹಾರಿಸಿದ್ದು, ಆರೋಪಿಯನ್ನ ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆ ವೇಳೆ ಗಾಯಗೊಂಡ ಕಾನ್ಸ್ಸ್ಟೇಬಲ್ ಹನುಮಂತ ಹಿಪ್ಪರಗಿ ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
15 ಕೇಸ್ಗಳಲ್ಲಿ ವಾಂಟೆಡ್ ಆಗಿದ್ದ ಮರಸಿಂಗನಹಳ್ಳಿ ಮದ್ದೂರು ಮೂಲದ ಯೋಗಾನಂದ್ ಪೆಪ್ಪರ್ ಸ್ಪ್ರೆ ಬಳಸಿ ಸಿನಿಮೀಯ ರೀತಿಯಲ್ಲಿ ಸರಗಳನ್ನ ಕದಿಯುತ್ತಿದ್ದ. ಸಾಕಷ್ಟು ದರೋಡೆ, ಬೈಕ್ ನಲ್ಲಿ ಚೈನ್ ಎಗರಿಸುವುದು, ಮನೆಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಅಲ್ಲದೇ ಪೊಲೀಸರ ಮೇಲೆ ಆರೋಪಿ ಹಾಲೋಬ್ರಿಕ್ ನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ಸ್ಟೇಬಲ್ ಹನುಮಂತ ಹಿಪ್ಪರಿಗಿ ಗಾಯಗೊಂಡಿದ್ದಾರೆ. ನಂತರ ಟೌನ್ ಸಿಪಿಐ ಶಶಿಧರ್ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಆರೋಪಿ ವಿರುದ್ಧ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.