- Advertisement -
- Advertisement -
ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದರು. ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ ನಂತರ ಕೆಲಹೊತ್ತಿನಲ್ಲಿ ವಾಂತಿ ಭೇದಿಯಿಂದ ವಿದ್ಯಾರ್ಥಿಗಳು ಬಳಲಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಿಹೆಚ್ಸಿಗೆ ಡಿಹೆಚ್ಒ ಡಾ.ಲಿಂಗರಾಜ್ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಸುದ್ದಿ ತಿಳಿದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಆಗಮಿಸಿದ್ದಾರೆ. ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಲು ನಿಖರ ಕಾರಣ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -