Monday, June 30, 2025
spot_imgspot_img
spot_imgspot_img

ನಿವೇಶನ ಕೊಡಿಸುವುದಾಗಿ ನಟ ಮಾಸ್ಟರ್ ಆನಂದ್ ಗೆ 18.50 ಲಕ್ಷ ರೂ. ವಂಚನೆ..!

- Advertisement -
- Advertisement -

ಚಿತ್ರನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರಿಗೆ ನಿವೇಶನ ನೀಡುವುದಾಗಿ 18.50 ಲಕ್ಷ ಮುಂಗಡ ಹಣ ಪಡೆದು ವಂಚಿಸಲಾಗಿದೆ.

ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ಹಣ ನೀಡಿದ್ದ ವಿರುದ್ಧ ಮಾಸ್ಟರ್ ಆನಂದ್ ಚಂದ್ರ ಲೇಔಟ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ. 2020ರ ಸೆಪ್ಟಂಬರ್‌ನಿಂದ 2021 ರ ಅಕ್ಟೋಬರ್‌ನ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಕೊಮ್ಮಘಟ್ಟದ ರಾಮಸಂದ್ರ ಗ್ರಾಮದಲ್ಲಿ ಆನಂದ್ ಶೂಟಿಂಗ್‌ಗಾಗಿ ತೆರಳಿದ್ದ ವೇಳೆ ನಿವೇಶನಗಳನ್ನು ನೋಡಿದ್ದರು. ಮನಿಕಾ ಕೆಂ.ಎಂ.ನಿಂದ ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರುವುದಾಗಿ ಹೇಳಿದ್ದರು.

ರಾಮಸಂದ್ರದ 2000 ಅಡಿ ವಿಸ್ತೀರ್ಣದ ನಿವೇಶನವನ್ನು ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ತೋರಿಸಿದ್ದರು. 70 ಲಕ್ಷಕ್ಕೆ ಖರೀದಿ ಒಪ್ಪಂದವಾಗಿ ಹಂತ ಹಂತವಾಗಿ 18.50 ಲಕ್ಷ ಮುಂಗಡ ಹಣವನ್ನು ಕಂಪನಿಗೆ ಮಾಸ್ಟರ್ ಆನಂದ್ ನೀಡಿದ್ದರು. ಕಂಪನಿಯು ಮಾಸ್ಟರ್ ಆನಂದ್ ಹಾಗೂ ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಖರಾರು ಪತ್ರವನ್ನು ಮಾಡಿಕೊಟ್ಟಿತ್ತು. ಈ ನಡುವೆ ನಿವೇಶನವನ್ನು ಕಂಪನಿ ಬೇರೆಯವರಿಗೆ ಮಾರಾಟ ಮಾಡಿದ್ದು, ಈ ಬಗ್ಗೆ ವಿಚಾರಿಸಿದಾಗ ಕಂಪನಿ ಯಾವುದೇ ರೀತಿ ಸ್ಪಂದಿಸುತ್ತಿಲ್ಲ. ಅಲ್ಲದೇ ಮುಂಗಡ ಹಣವನ್ನು ಸಹ ವಾಪಸ್ ನೀಡದೆ ವಂಚನೆ ಮಾಡಿದೆ. ಇನ್ನು ವಂಚನೆ ಬಗ್ಗೆ ಚಂದ್ರ ಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.

- Advertisement -

Related news

error: Content is protected !!